Video

‘ಏಳುಮಲೆ’ಯಿಂದ ಬಂತು ಮೊದಲ ಹಾಡು

‘ಏಳುಮಲೆ’ ಚಿತ್ರದ ಮೆಲೋಡಿ ಹಾಡು ರಿಲೀಸ್…

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಗಡಿಮೀರಿದ ಪ್ರೇಮಕಥೆ

‘ಏಳುಮಲೆ’ ಚಿತ್ರದಲ್ಲಿ ರಾಣಾ-ಪ್ರಿಯಾಂಕಾ ಜೋಡಿ

‘ಏಕ್‌ ಲವ್‌ ಯಾ’ ಸಿನೆಮಾದ ನಂತರ ನಟಿ ರಕ್ಷಿತಾ ಪ್ರೇಮ್‌ ಅವರ ಸೋದರ ರಾಣಾ ಮತ್ತೊಂದು ಹೊಸ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ರಾಣಾ ಅಭಿನಯದ ಹೊಸ ಸಿನೆಮಾಕ್ಕೆ ‘ಏಳುಮಲೆ’ ಎಂದು ಹೆಸರಿಡಲಾಗಿದ್ದು, ಈ ಸಿನೆಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಇದೇ ವೇಳೆ ‘ಏಳುಮಲೆ’ ಚಿತ್ರತಂಡ ಈ ಚಿತ್ರದ ಮೊದಲ ಮೆಲೋಡಿ ಗೀತೆಯೊಂದನ್ನು ಯು-ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಇನ್ನು ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಈ ಸಿನೆಮಾಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ‘ಏಳುಮಲೆ’ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.

ಹೊರಬಂತು ‘ಏಳುಮಲೆ’ಯಲ್ಲೊಂದು ಮಧುರ ಗೀತೆ…!

‘ಏಳುಮಲೆ’ ಚಿತ್ರದ ‘ಯಾವಾಗ ಯಾವಾಗ…’ ಎಂಬ ಮೆಲೋಡಿ ಹಾಡು ‘ಆನಂದ್ ಆಡಿಯೋ’ ಯೂ-ಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲಿಯೂ ಗೀತೆಯನ್ನು ಅನಾವರಣ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದಾರೆ. ಡಿ. ಇಮ್ಮನ್ ಸಂಗೀತ ಒದಗಿಸಿದ್ದಾರೆ. ನಾಯಕ ಮತ್ತು ನಾಯಕಿಯ ಮಧುರ ಪ್ರೀತಿಯ ಭಾವನೆಯನ್ನು ಈ ಹಾಡಿನ ಮೂಲಕ ತೆರೆದಿಡುವ ಪ್ರಯತ್ನ ಮಾಡಿದೆ ಚಿತ್ರತಂಡ.

‘ಏಳುಮಲೆ’ ಚಿತ್ರದ ‘ಯಾವಾಗ ಯಾವಾಗ…’ ಎಂಬ ಮೆಲೋಡಿ ಹಾಡಿನ ಲಿರಿಕಲ್‌ ವಿಡಿಯೋವನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್‌ ಅನ್ನು ಕ್ಲಿಕ್‌ ಮಾಡಬಹುದು…

ಕರ್ನಾಟಕ – ತಮಿಳುನಾಡು ಗಡಿಭಾಗದ ಪ್ರೇಮಕಥೆ

ಕರ್ನಾಟಕ – ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ‘ಏಳುಮಲೆ’ ಸಿನೆಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ‘ಕನ್ನಡದ ಹುಡ್ಗ’ ಹರೀಶನಾಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್‌ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಮೊದಲಾದ ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ನೈಜ ಘಟನೆಯನ್ನು ಆಧರಿಸಿದ ‘ಏಳುಮಲೆ’

‘ಚೌಕ’ ಮತ್ತು ‘ಕಾಟೇರ’ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನೆಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್‌ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ‘ಏಳುಮಲೆ’ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ಸಹ ನಿರ್ದೇಶಕರಾಗಿ, ಗೀತ ಸಾಹಿತಿಯಾಗಿ ‘ಕಾಟೇರ’, ‘ಗುರುಶಿಷ್ಯರು’ ಸೇರಿದಂತೆ ಅನೇಕ ಸಿನೆಮಾಗಳನ್ನು ಮಾಡಿರುವ ಪುನೀತ್‌ ರಂಗಸ್ವಾಮಿ ಈಗ ‘ಏಳುಮಲೆ’ ಸಿನೆಮಾ ನಿರ್ದೇಶಿಸುತ್ತಿದ್ದಾರೆ. ‘ಏಳುಮಲೆ’ ಚಿತ್ರಕ್ಕೆ ಅದ್ವಿತ ಗುರುಮೂರ್ತಿ ಛಾಯಾಗ್ರಹಣ, ಕೆ. ಎಂ. ಪ್ರಕಾಶ್‌ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್‌ ರಂಗಸ್ವಾಮಿ ಸಂಭಾಷಣೆ ಬರೆದಿದ್ದಾರೆ. ಚಿತ್ರದ ಹಾಡುಗಳಿಗೆ ಡಿ. ಇಮ್ಮನ್‌ ಸಂಗೀತ ಸಂಯೋಜನೆಯಿದೆ. ಕನ್ನಡದ ಜೊತೆಗೆ ‘ಏಳುಮಲೆ’ ಸಿನೆಮಾವನ್ನು ತಮಿಳು ಮತ್ತು ತೆಲುಗು ಭಾಷೆಗಳಲ್ಲೂ ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.

Related Posts

error: Content is protected !!